-->
ಸಾಂಸ್ಕೃತಿಕ ರಂಗಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ

ಸಾಂಸ್ಕೃತಿಕ ರಂಗಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ

ಉಡುಪಿ, ಅ.29 (ಲೋಕಬಂಧು ವಾರ್ತೆ): ಸಾಂಸ್ಕೃತಿಕ ರಂಗಕ್ಕೆ ಬಂಟ ಸಮಾಜದ ಕೊಡುಗೆ ಅಪಾರ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಮಿಜಾರುಗುತ್ತು ಡಾ. ಮೋಹನ ಆಳ್ವ ಹೇಳಿದರು.ಭಾನುವಾರ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ ಅವರಣದಲ್ಲಿ ನಡೆದ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಉದ್ಘಾಟಿಸಿ ಮಾತನಾಡಿದರು.ಅವಿಭಜಿತ ದ.ಕ. ಜಿಲ್ಲೆಯಲ್ಲಿ ಯಕ್ಷಗಾನ ಕ್ಷೇತ್ರವನ್ನು ಕಟ್ಟಿ ಬೆಳೆಸುವಲ್ಲಿ ಬಂಟ ಸಮಾಜದ ಕಲಾವಿದರ ಕಲಾ ಪೋಷಕರು ಅತೀ ಹೆಚ್ಚು ಕೊಡುಗೆ ನೀಡಿದ್ದಾರೆ.
ವಿಶ್ವದ ಎಲ್ಲೆಡೆ ಬಂಟ ಜನಾಂಗದವರು ಸಾಂಸ್ಕೃತಿಕ ರಂಗಕ್ಕೆ ವಿಶೇಷ ಒತ್ತುನೀಡಿದ್ದಾರೆ.
ಕ್ರೀಡಾ ಮನೋಭಾವದಿಂದಾಗಿಯೇ ಈ ಸಮುದಾಯ ಇಷ್ಟು ಸಾಧನೆ ಮಾಡಲು ಸಾಧ್ಯವಾಗಿದೆ.
ಸಮಾಜದ ಸೌಂದರ್ಯ ಪ್ರಜ್ಞೆ, ವಿಶಾಲ ಮನೋಧರ್ಮದಿಂದ ಸುಂದರ ಬದುಕು ಕಟ್ಟಿಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಉದ್ಯಮಿ ಪುರುಷೋತ್ತಮ ಶೆಟ್ಟಿ, ರಾಜೇಂದ್ರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಕರ್ನೂರು ಮೋಹನ್ ದಾಸ್ ಶೆಟ್ಟಿ, ದ,ಕ. ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article