-->
Deepotsava:ಕೃಷ್ಣಮಠದಲ್ಲಿ ದೀಪೋತ್ಸವಕ್ಕೆ ಚಾಲನೆ

Deepotsava:ಕೃಷ್ಣಮಠದಲ್ಲಿ ದೀಪೋತ್ಸವಕ್ಕೆ ಚಾಲನೆ

ಉಡುಪಿ, ನ.24 (ಲೋಕಬಂಧು ವಾರ್ತೆ): ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುವ ಕಾರ್ತೀಕ ದೀಪೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ದೀಪೋತ್ಸವ ಅಂಗವಾಗಿ ರಥಬೀದಿಯಲ್ಲಿ ನಿರ್ಮಿಸಲಾದ ಅಟ್ಟಳಿಗೆಯಲ್ಲಿ ಹಣತೆ ಇಡುವ ಕಾರ್ಯಕ್ರಮದಲ್ಲಿ ಅಷ್ಟಮಠಾಧೀಶರು ಭಾಗವಹಿಸಿದ್ದರು.
ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ರಾಜರಾಜೇಶ್ವರತೀರ್ಥ ಶ್ರೀಪಾದರು, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮತ್ತು ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.
ಇಂದಿನಿಂದ ಮೂರು ದಿನಗಳ ವರೆಗೆ ದೀಪೋತ್ಸವ ನಡೆಯಲಿದೆ.


Ads on article

Advertise in articles 1

advertising articles 2

Advertise under the article