ಶೀರೂರು ಶ್ರೀಗಳನ್ನು ಭೇಟಿ ಮಾಡಿದ ಅಣ್ಣಾಮಲೈ
Wednesday, July 3, 2024
ಶೀರೂರು ಶ್ರೀಗಳನ್ನು ಭೇಟಿ ಮಾಡಿದ ಅಣ್ಣಾಮಲೈ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಭಾವಿ ಪರ್ಯಾಯ ಶೀರೂರು ಮಠದ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ತಮಿಳುನಾಡು ಸಂಚಾರದಲ್ಲಿ ಚೆನ್ಬೈ ಟಿ .ನಗರದ ಪೇಜಾವರ ಮಠದ ಕೃಷ್ಣ ಹನುಮಂತ ರಾಘವೇಂದ್ರ ಮಠದಲ್ಲಿ ಸಂಸ್ಥಾನ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಶ್ರೀಗಳನ್ನು ಭೇಟಿ ಮಾಡಿ ಫಲಮಂತ್ರಾಕ್ಷತೆ ಸ್ವೀಕರಿಸಿದರು.