ಪಕ್ಷ ವಿರೋಧಿ ವರ್ತನೆ: ಗ್ರಾ.ಪಂ. ಅಧ್ಯಕ್ಷೆ ಉಚ್ಛಾಟನೆ
Tuesday, July 2, 2024
ಪಕ್ಷ ವಿರೋಧಿ ವರ್ತನೆ: ಗ್ರಾ.ಪಂ. ಅಧ್ಯಕ್ಷೆ ಉಚ್ಛಾಟನೆ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಪಕ್ಷ ವಿರೋಧಿ ಚಟುವಟಿಕೆ ಹಾಗೂ ಅಶಿಸ್ತಿನ ವರ್ತನೆಗಾಗಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿ ಬಿಜೆಪಿ ಉಡುಪಿ ನಗರ ಅಧ್ಯಕ್ಷ ದಿನೇಶ್ ಅಮೀನ್ ಆದೇಶ ಹೊರಡಿಸಿದ್ದಾರೆ.
'ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತಿದ್ದ ನೀವು ಪಕ್ಷದ ಚೌಕಟ್ಟನ್ನು ಮೀರಿ ಗ್ರಾ.ಪಂ.ನ ಸದಸ್ಯರು ಹಾಗೂ ನಾಯಕರ ಮೇಲೆ ಸುಳ್ಳು ಕೇಸು ದಾಖಲಿಸಿದ್ದು, ಪಕ್ಷಕ್ಕೆ ಮುಜುಗರವಾಗುವ ಸನ್ನಿವೇಶ ನಿರ್ಮಾಣ ಮಾಡಿದ್ದೀರಿ.
ಅಲ್ಲದೇ, ಪಂಚಾಯತ್ ಗೆ ಸಂಬಂಧಪಟ್ಟ ಕೆಲವೊಂದು ನಿರ್ಧಾರಗಳನ್ನು ಪಕ್ಷದ ಗ್ರಾ.ಪಂ. ಸದಸ್ಯರ ಗಮನಕ್ಕೆ ತಾರದೇ ಭ್ರಷ್ಟಾಚಾರ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.
ಹೀಗಾಗಿ ತಮ್ಮ ಅಶಿಸ್ತಿನ ವರ್ತನೆಗಾಗಿ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಚಿಸಲಾಗಿದೆ' ಎಂದು ದಿನೇಶ್ ಅಮೀನ್ ಆದೇಶದಲ್ಲಿ ತಿಳಿಸಿದ್ದಾರೆ.