-->
ಗುರು ವಂದನೆ: ಶೋಭಾಯಾತ್ರೆ ಸಂಪನ್ನ

ಗುರು ವಂದನೆ: ಶೋಭಾಯಾತ್ರೆ ಸಂಪನ್ನ

ಗುರು ವಂದನೆ: ಶೋಭಾಯಾತ್ರೆ ಸಂಪನ್ನ

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ

ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ದಾಸ ಸಾಹಿತ್ಯ ಪ್ರಾಜೆಕ್ಟ್ ತಿರುಮಲ ತಿರುಪತಿ ದೇವಸ್ಥಾನಮ್ ತಿರುಪತಿ ಸಹಭಾಗಿತ್ವದಲ್ಲಿ ಭಾನುವಾರ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುವ ಗುರುವಂದನಾ ಮಹೋತ್ಸವದ ಪೂರ್ವಭಾವಿಯಾಗಿ ಶನಿವಾರ ಜೋಡುರಸ್ತೆಯಿಂದ ಕೃಷ್ಣಮಠ ವರೆಗೆ ಶೋಭಾಯಾತ್ರೆ ನಡೆಯಿತು.
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹೋತ್ಸವಕ್ಕೆ ಚಾಲನೆ ನೀಡಿದರು.
ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.
ದಾಸ ಸಾಹಿತ್ಯ ಪ್ರಾಜೆಕ್ಟ್ ಮುಖ್ಯ ಅಧಿಕಾರಿ ಆನಂದತೀರ್ಥಾಚಾರ್ ಪಗಡಾಲ್, ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article