
ಹೃದಯಾಘಾತದಿಂದ ವಿದ್ಯಾರ್ಥಿನಿ ನಿಧನ
Wednesday, July 3, 2024
ಹೃದಯಾಘಾತದಿಂದ ವಿದ್ಯಾರ್ಥಿನಿ ನಿಧನ
ಲೋಕಬಂಧುನ್ಯೂಸ್ ಡೆಸ್ಕ್, ಶಿರ್ವ
ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ.
ಆಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.
ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಆಕೆಗೆ ಹೃದಯ ಸಂಬಂಧಿ ಕಾಯಿಲೆ ಇತ್ತೆಂದು ತಿಳಿದುಬಂದಿದೆ.
ಭಾಗ್ಯಶ್ರೀ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕರು, ವಿದ್ಯಾರ್ಥಿ ವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತಳ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿತ್ತು.