ಚಲಿಸುತ್ತಿದ್ದಾಗಲೇ ಕಳಚಿದ ಸರ್ಕಾರಿ ಬಸ್ಸಿನ ಟಯರ್!
Monday, July 22, 2024
ಚಲಿಸುತ್ತಿದ್ದಾಗಲೇ ಕಳಚಿದ ಸರ್ಕಾರಿ ಬಸ್ಸಿನ ಟಯರ್!
ಲೋಕಬಂಧುನ್ಯೂಸ್ ಡೆಸ್ಕ್, ಕುಂದಾಪುರ
ಚಲಿಸುತ್ತಿದ್ದಾಗಲೇ ಕೆಎಸ್ಆರ್.ಟಿಸಿ ಬಸ್ಸಿನ ಟಯರ್ ಕಳಚಿದ್ದು, ಭಾರಿ ಅನಾಹುತ ತಪ್ಪಿದ ಘಟನೆ ಆಜ್ರಿ ಸಮೀಪದ ಹೆಮ್ಮಕ್ಕಿ ಬಳಿ ನಡೆದಿದೆ.
ಆಜ್ರಿಯಿಂದ ಕುಂದಾಪುರಕ್ಕೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಬಸ್ ನಿಧಾನ ಗತಿಯಲ್ಲಿ ಸಂಚರಿಸುತ್ತಿದ್ದರಿಂದ ಅನಾಹುತ ಸಂಭವಿಸದೆ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಆಜ್ರಿ ನಿವಾಸಿ ಚಂದ್ರಹಾಸ ಪ್ರತಿಕ್ರಿಯೆ ನೀಡಿದ್ದು ಕೆಎಸ್ಆರ್.ಟಿಸಿ ಡಿಪೋ ಮೆಕ್ಯಾನಿಕ್ಗಳ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ.
ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ ಆಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.