ಗುರುಗಳನ್ನು ಗೌರವಿಸುವ ಸತ್ಕಾರ್ಯ ಪ್ರಶಂಸನೀಯ
Friday, September 6, 2024
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಗುರಿಯೆಡೆಗೆ ದಾರಿ ತೋರಿ ಸುಜ್ಞಾನವನು ನೀಡಿ, ಮುನ್ನಡೆಸಿದ ಗುರುಗಳನ್ನು ಗೌರವಿಸುವ ಸತ್ಕಾರ್ಯ ಪ್ರಶಂಸನೀಯ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು.
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಅಧ್ಯಕ್ಷತೆಯಲ್ಲಿ ನಗರ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೆ.5ರಂದು ನಡೆದ ಶಿಕ್ಷಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಕರ ಸಾಧನೆಯ ಆಧಾರದಲ್ಲಿ ಸರಕಾರ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸುವ ಪರಿಪಾಠ ಇದ್ದರೂ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರ ರಾಜ್ಯ ಮಟ್ಟದ 'ಉತ್ತಮ ಪ್ರಾಂಶುಪಾಲ' ಪ್ರಶಸ್ತಿಯನ್ನು ಓಲೈಕೆ ರಾಜಕಾರಣದಿಂದ ತಡೆಹಿಡಿದಿರುವುದು ಖಂಡನೀಯ.
ಕಾಂಗ್ರೆಸ್ ತುಷ್ಟೀಕರಣ ನೀತಿಯ ರಾಜಕಾರಣವನ್ನು ಶೈಕ್ಷಣಿಕ ಕ್ಷೇತ್ರಕ್ಕೂ ಪಸರಿಸುವ ಮೂಲಕ ಶಿಕ್ಷಕ ವೃಂದಕ್ಕೇ ಅಪಚಾರ ಮಾಡಿದೆ. ಶಿಕ್ಷಕರ ಜೊತೆಗೆ ಉಡುಪಿ ಜಿಲ್ಲೆಯನ್ನು ಅವಮಾನಿಸಿರುವ ರಾಜ್ಯ ಸರಕಾರದ ನಡೆ ವಿರುದ್ಧ ಹೋರಾಟ ಅನಿವಾರ್ಯ ಎಂದವರು ತಿಳಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಜೀವನದ ಯಶಸ್ಸಿಗೆ ವಿದ್ಯೆ ಕಲಿಸಿದ ಗುರುಗಳ ಆಶೀರ್ವಾದ ಅತ್ಯಗತ್ಯ. ಈ ನಿಟ್ಟಿನಲ್ಲಿ ನಗರ ಮಹಿಳಾ ಮೋರ್ಚಾ ಹಮ್ಮಿಕೊಂಡಿರುವ ಸಾಧಕ ಶಿಕ್ಷಕರಿಗೆ ಗುರುವಂದನೆ ಸಲ್ಲಿಸುವ ಕಾರ್ಯಕ್ರಮ ಅಭಿನಂದನೀಯ ಎಂದರು.
ವಿವಿಧ ಕ್ಷೇತ್ರಗಳ ಸಾಧಕರಾದ ಶಿಕ್ಷಣ- ಸುಬ್ರಾಯ ಉಪಾಧ್ಯಾಯ, ಯಕ್ಷಗಾನ- ರತ್ನಾಕರ ಶೆಣೈ, ಯೋಗ- ಅನಿತಾ ಡಿ. ಸುವರ್ಣ, ಈಜು- ಗಂಗಾಧರ್ ಕಡೆಕಾರ್, ಭಗವದ್ಗೀತೆ- ಮೀನಾಕ್ಷಿ ಪೈ, ಸಂಗೀತ- ವಿನುತಾ ಆಚಾರ್ಯ, ಕೀಬೋರ್ಡ್- ರವಿರಾಜ್ ಉಪಾಧ್ಯಾಯ, ಕ್ರೀಡೆ- ಗಣೇಶ್ ಕೋಟ್ಯಾನ್, ಹುಲಿವೇಷ- ಶಿವಣ್ಣ, ತಾಲೀಮು ಕವಾಯತು- ಸಿರಿಲ್ ನೊರೋನ್ಹ ಅವರನ್ನು ಸನ್ಮಾನಿಸಲಾಯಿತು.
ಕರ್ನಾಟಕ ಜನಪದ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷೆ, ಉಡುಪಿ ನಗರ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಯಾ ಕಾಮತ್ ಮಣಿಪಾಲ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು ಮತ್ತು ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಂ. ಅಂಚನ್, ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ ಕುಲಾಲ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ ಮೊದಲಾದವರಿದ್ದರು.
ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಾಂತಿ ಮನೋಜ್ ಕಾರ್ಯಕ್ರಮ ನಿರೂಪಿಸಿ, ಸರೋಜಾ ಶೆಣೈ ವಂದಿಸಿದರು.