-->
ಕಸಾಪ ವತಿಯಿಂದ ಶಿಕ್ಷಕರ ದಿನಾಚರಣೆ

ಕಸಾಪ ವತಿಯಿಂದ ಶಿಕ್ಷಕರ ದಿನಾಚರಣೆ

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ.5ರಂದು ಕನ್ನಡ ನಾಡು ನುಡಿ ಸಂಸ್ಕೃತಿ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿದ ಅನನ್ಯ ಸೇವೆಗಾಗಿ ಕೊಡವೂರು ಮಧ್ವ ನಗರದ ಶಿಕ್ಷಕಿ ಸುಮನ ಮತ್ತು ನಿವೃತ್ತ ಶಿಕ್ಷಕ ಸುರೇಶ್ ಭಟ್ ಕಾಶಿ ದಂಪತಿಯನ್ನು ಅವರ ಮನೆಯಲ್ಲಿಯೇ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಗೌರವ ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಪದಾಧಿಕಾರಿಗಳಾದ ಸುಮಿತ್ರ ಕೆರೆಮಠ, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್ ಮುಂತಾದವರಿದ್ದರು.


ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

Ads on article

Advertise in articles 1

advertising articles 2

Advertise under the article