
`ಉಡಾ' ಅಧ್ಯಕ್ಷರಾಗಿ ದಿನಕರ ಹೇರೂರು ಅಧಿಕಾರ ಸ್ವೀಕಾರ
Monday, November 4, 2024
ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ (ಉಡಾ)ದ ನೂತನ ಅಧ್ಯಕ್ಷ ದಿನಕರ ಹೇರೂರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಈ ಸ್ಥಾನ ನೀಡಿದೆ. ಮುಂದಿನ ದಿನಗಳಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಾವು ಬದ್ಧರಾಗಿದ್ದೇವೆ ಎಂದರು.
ಪ್ರಾಧಿಕಾರದಲ್ಲಿ ಕಡತಗಳು ವಿಲೇವಾರಿಯಾಗದೆ ಬಾಕಿ ಇವೆ ಎಂಬ ಆರೋಪಗಳು ಕೇಳಿಬಂದಿವೆ. ಆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದು. ಪ್ರಾಧಿಕಾರದಲ್ಲಿನ ಸಿಬ್ಬಂದಿ ಕೊರತೆ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದರು.
ಭ್ರಷ್ಟಾಚಾರ ರಹಿತವಾಗಿ ಕಾರ್ಯನಿರ್ವಹಿಸುವತ್ತ ಗಮನಹರಿಸಲಿದ್ದೇವೆ ಎಂದು ದಿನಕರ್ ತಿಳಿಸಿದರು.
ಪ್ರಾಧಿಕಾರದ ಸದಸ್ಯರಾದ ಜ್ಯೋತಿ ಹೆಬ್ಬಾರ್ ಉಡುಪಿ, ಸತೀಶ್ ಕುಮಾರ್ ಉಡುಪಿ, ಡೇನಿ ವಿಲಯಂ ಲಾರೆನ್ಸ್ ಪಿಂಟೊ, ದಿಲೀಪ್ ಹೆಗ್ಡೆ, ಮತ್ತು ಗಿರೀಶ್ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು.