ಸಚಿವ ಜಮೀರ್ ಗಡಿಪಾರಾದರೆ ರಾಜ್ಯಕ್ಕೆ ಒಳ್ಳೆಯದು
Sunday, November 3, 2024
ಲೋಕಬಂಧು ನ್ಯೂಸ್, ಚಿತ್ರದುರ್ಗ
ಶಾಂತಿಯುತ ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಅವರಿಂದ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಅವರನ್ನು ಗಡಿಪಾರು ಮಾಡಿದರೆ ರಾಜ್ಯಕ್ಕೆ ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ನ.3ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಿಂದ ಹೆಸರು ಹೇಳಿ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ.
ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ವಿಜಯೇಂದ್ರ ಸವಾಲು ಹಾಕಿದ್ದಾರೆ.