-->
ಮುಡಾ ಪ್ರಕರಣ ಸಿಬಿಐಗೊಪ್ಪಿಸಿ

ಮುಡಾ ಪ್ರಕರಣ ಸಿಬಿಐಗೊಪ್ಪಿಸಿ

ಲೋಕಬಂಧು ನ್ಯೂಸ್, ಬೆಂಗಳೂರು
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತದ ಎದುರು ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಿದ್ದಾರೆ. ಈ ತನಿಖೆಯಿಂದ ಯಾವುದೇ ಪ್ರಯೋಜನವಿಲ್ಲ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು.


ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಎಲ್ಲರಿಗೂ ತಿಳಿದಿದೆ. ನನ್ನ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದ ಸಿದ್ದರಾಮಯ್ಯ ಲೋಕಾಯುಕ್ತದ ಬದಲು ಸಿಬಿಐ ತನಿಖೆ ಎದುರಿಸಲಿ ಎಂದು ಯಡಿಯೂರಪ್ಪ ಸವಾಲೆಸೆದಿದ್ದಾರೆ.

Ads on article

Advertise in articles 1

advertising articles 2

Advertise under the article