-->
ಕೃಷ್ಣ ಮಠದಲ್ಲಿ ಯತಿ ಸಮಾಗಮ

ಕೃಷ್ಣ ಮಠದಲ್ಲಿ ಯತಿ ಸಮಾಗಮ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಮತ್ತು ತ್ರಿಚಿ ಮಹಾಸಂಸ್ಥಾನದ ಶ್ರೀ ಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಸೋಮವಾರ ಉಡುಪಿಗೆ ಆಗಮಿಸಿ ಶ್ರೀಕೃಷ್ಣ ದರ್ಶನ ಪಡೆದರು.
ಶ್ರೀಮಠದ ವತಿಯಿಂದ ಸಾಂಪ್ರದಾಯಿಕ ಗೌರವಾದರಗಳೊಂದಿಗೆ ಯತಿದ್ವಯರನ್ನು ಸ್ವಾಗತಿಸಲಾಯಿತು.
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಭಯ ಶ್ರೀಗಳಿಗೆ ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನ ಮಾಡಿಸಿ, ಪ್ರಸಾದ ನೀಡಿದರು.
ಹರಿಹರಪುರ ಮತ್ತು ತ್ರಿಚಿ ಶ್ರೀಪಾದರು ತಮ್ಮ ಆಶೀರ್ವಚನದಲ್ಲಿ ಸರ್ವಜನೋಪಯೋಗಿಯಾದ ಕೋಟಿ ಗೀತಾ ಲೇಖನ ಯಜ್ಞ ಸಾಮಾಜಿಕ ಕ್ರಾಂತಿಯಾಗಿ ಬೆಳೆದುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗೀತಾ ಮಂದಿರಕ್ಕೆ ಭೇಟಿ ನೀಡಿ, ಗೀತಾ ಯೋಜನೆಗಳ ಮಾಹಿತಿ ಪಡೆದರು.
ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article