-->
ಮಲಬಾರ್ ವಿಶ್ವ ರಂಗ ಪುರಸ್ಕಾರಕ್ಕೆ ಆಯ್ಕೆ

ಮಲಬಾರ್ ವಿಶ್ವ ರಂಗ ಪುರಸ್ಕಾರಕ್ಕೆ ಆಯ್ಕೆ

ಲೋಕಬಂಧು ನ್ಯೂಸ್
ಉಡುಪಿ, ಫೆ.27: ಇಲ್ಲಿನ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ವತಿಯಿಂದ ನೀಡಲಾಗುವ ಆರನೇ ವರ್ಷದ ಮಲಬಾರ್ ವಿಶ್ವ ರಂಗ ಪುರಸ್ಕಾರಕ್ಕೆ ರಾಜ್ಯ ಮತ್ತು ಹೊರ ರಾಜ್ಯದ  ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.
ಅರವಿಂದ ಕುಲಕರ್ಣಿ ಧಾರವಾಡ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ), ಗಣೇಶ್ ಕಾರಂತ ಬೈಂದೂರು (ರಂಗ ಸಂಘಟಕ ಹಾಗೂ ನಿರ್ದೇಶಕ) ಪ್ರಿಯಾ ಸರೋಜಾದೇವಿ ಮುಂಬೈ (ರಂಗನಟಿ ಹಾಗೂ ಕಂಠದಾನ ಕಲಾವಿದೆ), ಪ್ರಕಾಶ್ ಜಿ.ಕೊಡವೂರು (ರಂಗನಟ ಹಾಗೂ ಸಂಘಟಕ) ಮತ್ತು ಮಂಜುಳಾ ಜನಾರ್ದನ್ ಮಂಗಳೂರು (ರಂಗನಟಿ) ಅವರಿಗೆ ಮಾರ್ಚ್ 26ರಂದು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವ ರಂಗಭೂಮಿ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿ ಪದಕದೊಂದಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನ ಮಾಡಲಾಗುವುದು.

Ads on article

Advertise in articles 1

advertising articles 2

Advertise under the article