-->
ಚಿತ್ರ ನಿರ್ದೇಶಕರ ದೃಷ್ಟಿಕೋನ ಮಹತ್ವದ್ದು

ಚಿತ್ರ ನಿರ್ದೇಶಕರ ದೃಷ್ಟಿಕೋನ ಮಹತ್ವದ್ದು

ಲೋಕಬಂಧು ನ್ಯೂಸ್
ಉಡುಪಿ, ಫೆ.21: ಚಿತ್ರ ನಿರ್ದೇಶಕರ ತಾತ್ವಿಕ ದೃಷ್ಟಿಕೋನ, ತಾಂತ್ರಿಕ ಅಂಶಗಳಿಗಿಂತ ಹೆಚ್ಚು ಮಹತ್ವದ್ದು ಮತ್ತು ಈ ದೃಷ್ಟಿಕೋನವೇ ತಾಂತ್ರಿಕ ಅಂಶಗಳು ಬಳಸಲ್ಪಡುವ ರೀತಿಯನ್ನು ನಿರ್ಧರಿಸುತ್ತದೆ ಎಂದು ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಪಿ.ಎನ್. ರಾಮಚಂದ್ರ ಹೇಳಿದರು.ಮಣಿಪಾಲ ಮಾಹೆ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಉಡುಪಿ ಚಿತ್ರ ಸಮಾಜ ಸಹಯೋಗದೊಂದಿಗೆ ಚಲನಚಿತ್ರ ನಿರ್ಮಾಣದ ಕರಕುಶಲತೆ ಕುರಿತ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ವಿವಿಧ ಚಿತ್ರ ರಚನೆಯ ವಿವಿಧ ಅಂಶಗಳಾದ ಚಿತ್ರಕಥೆ, ಛಾಯಾಗ್ರಹಣ, ಸಂಕಲನ, ಪಾತ್ರಗಳು ಮತ್ತು ನಟನೆ, ಧ್ವನಿ, ರಂಗಸಜ್ಜಿಕೆ ಇತ್ಯಾದಿಗಳನ್ನು ವಿವರಿಸಿದರು. ಈ ಎಲ್ಲ ತಾಂತ್ರಿಕ ಅಂಶಗಳು ಮುಖ್ಯವಾದದ್ದು, ಆದರೆ ಚಲನಚಿತ್ರ ನಿರ್ದೇಶಕರ ತಾತ್ವಿಕ ದೃಷ್ಟಿಕೋನ ಹೆಚ್ಚು ಮುಖ್ಯ ಎಂದವರು ಸಮರ್ಥಿಸಿಕೊಂಡರು.


ತಾತ್ವಿಕ ದೃಷ್ಟಿಕೋನವನ್ನು ಚಲನಚಿತ್ರದಲ್ಲಿ ತರಲು ಎಲ್ಲಾ ತಾಂತ್ರಿಕತೆಗಳನ್ನು ಸಜ್ಜುಗೊಳಿಸಬೇಕಾಗಿದೆ. ಚಲನಚಿತ್ರ ನಿರ್ದೇಶಕರ ತಾತ್ವಿಕ ನೆಲೆ ಚಲನಚಿತ್ರ ನಿರ್ಮಾಣದ ಕರಕುಶಲ ಸ್ವರೂಪವನ್ನು ನಿರ್ಧರಿಸುತ್ತದೆ ಎಂದವರು ಹೇಳಿದರು.


ನಂತರ ಅವರ ಇತ್ತೀಚಿನ ಚಿತ್ರ 'ಹಿಯರ್ ಓ, ಮಹಾತ್ಮ' ಪ್ರದರ್ಶಿಸಲಾಯಿತು.
ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ, ಪ್ರೊ. ಫಣಿರಾಜ್, ಪ್ರೊ. ವರದೇಶ್ ಹಿರೇಗಂಗೆ, ಡಾ. ಶ್ರೀಕುಮಾರ್, ನಾಗೇಶ್ ಉದ್ಯಾವರ, ಸಂತೋಷ್ ನಾಯಕ್ ಪಟ್ಲ ಮೊದಲಾದವರು ಸಂವಾದದಲ್ಲಿ ಭಾಗವಹಿಸಿದ್ದರು

Ads on article

Advertise in articles 1

advertising articles 2

Advertise under the article