.jpg)
ವಸ್ತುಪ್ರದರ್ಶನ ಮಾರಾಟ ಮಳಿಗೆಗೆ ಚಾಲನೆ
Friday, February 28, 2025
ಲೋಕಬಂಧು ನ್ಯೂಸ್
ಕಾಪು, ಫೆ.27: ಕಾಪು ಶ್ರೀ ಹೊಸಮಾರಿಗುಡಿ ದೇವಳದಲ್ಲಿ ನಡೆಯುತ್ತಿರುವ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಲುವಾಗಿ ಆಯೋಜಿಸಲಾದ ವಸ್ತುಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾಪು ಶಾಸಕ ಹಾಗೂ ಶ್ರೀಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಇದ್ದರು.