-->
ಕೊರಂಗ್ರಪಾಡಿ ಸಹಕಾರ ಸಂಘಕ್ಕೆ ಆಯ್ಕೆ

ಕೊರಂಗ್ರಪಾಡಿ ಸಹಕಾರ ಸಂಘಕ್ಕೆ ಆಯ್ಕೆ

ಲೋಕಬಂಧು ನ್ಯೂಸ್
ಉಡುಪಿ: ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಮುಂದಿನ 5 ವರ್ಷ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಶ್ರೀಧರ ದೇವಾಡಿಗ ಅವರು ಅಟೊರಿಕ್ಷಾ ನಿರ್ವಾಹಕರ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ನಾದಶ್ರೀ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷರೂ ಆಗಿದ್ದಾರೆ.


ದಿನೇಶ್ ಕಿಣಿ ಅವರು ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ.


ಭಾನುವಾರ ನಡೆದ ನಡೆದ ಚುನಾವಣೆಯಲ್ಲಿ ನಿರ್ದೇಶಕರಾದ ವಿಜಯ ಪೂಜಾರಿ ಬೈಲೂರು, ಜಯಕರ ಪೂಜಾರಿ ಕೊರಂಗ್ರಪಾಡಿ, ಐತಪ್ಪ ಆರ್. ಅಮೀನ್ ಮಾರ್ಪಳ್ಳಿ, ರಮಾನಂದ ನಾಯಕ್ ಅಲೆವೂರು, ಅಶೋಕ್ ಕುಮಾರ್ ಅಲೆವೂರು, ರಮಾದೇವಿ ಇಂದಿರಾನಗರ, ಲಕ್ಷ್ಮೀ ಚಂದ್ರಶೇಖರ್ ಇಂದಿರಾನಗರ, ಸದಾನಂದ ಶೆಟ್ಟಿ ಕುಕ್ಕಿಕಟ್ಟೆ, ವಿಜಯ ಪಾಲನ್ ಇಂದಿರಾನಗರ, ಕೇಶವ ಕೊರಂಗ್ರಪಾಡಿ ಹಾಗೂ ದಿನೇಶ್ ಸಿ. ನಾಯ್ಕ್ ಅಲೆವೂರು ಪಾಲ್ಗೊಂಡಿದ್ದರು.


ಚುನಾವಣಾಧಿಕಾರಿಯಾಗಿ ಜಯಂತಿ ಎಸ್. ಕಾರ್ಯನಿರ್ವಹಿಸಿದ್ದು, ಸಂಘದ ಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮೀ ಮಾರ್ಪಳ್ಳಿ ಸಹಕರಿಸಿದರು.

Ads on article

Advertise in articles 1

advertising articles 2

Advertise under the article