.jpg)
ಮಾರಿಯಮ್ಮ, ಉಚ್ಚಂಗೀ ಸ್ವರ್ಣಮಯಪೀಠ ಶುದ್ಧಿ
Saturday, March 1, 2025
ಲೋಕಬಂಧು ನ್ಯೂಸ್
ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನಃಪ್ರತಿಷ್ಠೆ ಬ್ರಹ್ಮಕುಂಭಾಭಿಷೇಕ ಮಹೋತ್ಸವದ ಐದನೇ ದಿನವಾದ ಶನಿವಾರ ಋತ್ವಿಜರಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರಧಾನ ತಂತ್ರಿ ಕೆ.ಪಿ.ಕುಮಾರಗುರು ತಂತ್ರಿ ಮತ್ತು ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ನೇತೃತ್ವದಲ್ಲಿ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಚಂಗಿ ಸ್ವರ್ಣಮಯಪೀಠ ಶುದ್ಧಿ ನಡೆಯಿತು.
ಮಾರ್ಚ್ 2ರಂದು ನಡೆಯುವ ಕಾಪು ಶ್ರೀ ಮಾರಿಯಮ್ಮ ದೇವಿಯ ಮಹಾಸ್ವರ್ಣಪೀಠ (ಗದ್ದಿಗೆ) ವ್ಯಸ್ತಾಂಗಸಮನ್ಯಾಸಪೂರ್ವಕ ಶ್ರೀಮಾರಿಯಮ್ಮ ಪ್ರತಿಷ್ಠೆ ಹಾಗೂ ಶ್ರೀ ಉಚ್ಚಂಗಿ ದೇವಿಯ ಸ್ವರ್ಣಪೀಠದೊಂದಿಗೆ ವ್ಯಸ್ತಾಂಗಸಮನ್ಯಾಸಪೂರ್ವಕ ಶ್ರೀ ಉಚ್ಚಂಗಿ ದೇವಿ ಪ್ರತಿಷ್ಠೆ ಹಿನ್ನೆಲೆಯಲ್ಲಿ ಶಯ್ಯಾಧಿವಾಸಪೂಜಾ, ಸ್ವರ್ಣಶಿಖರಾದಿವಾಸ ಇತ್ಯಾದಿ ಧಾರ್ಮಿಕ ವಿಧಿಗಳು ಸಂಪನ್ನಗೊಂಡವು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮೂಳೂರು ಸುಧಾಕರ್ ಹೆಗ್ಡೆ, ರವಿ ಸುಂದರ್ ಶೆಟ್ಟಿ, ಅನಿಲ್ ಬಲ್ಲಾಳ್, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್.ಪಾಲನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಗಂಗಾಧರ ಸುವರ್ಣ, ಮನೋಹರ್ ಎಸ್.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಉದಯ್ ಸುಂದರ್ ಶೆಟ್ಟಿ, ಭಗವಾನ್ದಾಸ್ ಶೆಟ್ಟಿಗಾರ್, ಯೋಗೀಶ್ ವಿ. ಶೆಟ್ಟಿ ಮತ್ತು ರಮೇಶ್ ಹೆಗ್ಡೆ, ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ ಮೊದಲಾದವರಿದ್ದರು.