-->
ಸ್ವಾಸ್ಥ್ಯ ಕೇಂದ್ರ ಕಾಮಗಾರಿಗೆ ಚಾಲನೆ

ಸ್ವಾಸ್ಥ್ಯ ಕೇಂದ್ರ ಕಾಮಗಾರಿಗೆ ಚಾಲನೆ

ಲೋಕಬಂಧು ನ್ಯೂಸ್
ಉಡುಪಿ: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸ್ವಾಸ್ಥ್ಯ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆಯುಷ್ಮಾನ್ ಆರೋಗ್ಯ ಮಂದಿರ ಯೋಜನೆಯಡಿ ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಶೀಘ್ರವಾಗಿ ನಿರ್ಮಾಣಗೊಳ್ಳಲಿರುವ ಈ ಸ್ವಾಸ್ಥ್ಯ ಕೇಂದ್ರದ ಮೂಲಕ ಉತ್ತಮ ಸೇವೆ ಸಾರ್ವಜನಿಕರಿಗೆ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಕಲ್ಯಾಣ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ಕುಂದರ್, ಉಪಾಧ್ಯಕ್ಷೆ ಪ್ರೇಮಲತಾ, ಗಣಪತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ದೇವಾಡಿಗ, ಸತೀಶ್ ನಾಯ್ಕ್, ನವೀನ್ ಕಾಂಚನ್, ಜಾನ್ಸನ್, ಪ್ರಶಾಂತ್, ಅನಿತಾ ಮತ್ತು ರತ್ನ ಕೇಶವ, ಹಿರಿಯ ಕಾರ್ಯಕರ್ತರಾದ ಗುರುರಾಜ್ ಗಾಣಿಗ ಮತ್ತು ಶ್ರೀಧರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article