ಕೇಂದ್ರದಿಂದ ದ್ವೇಷ ರಾಜಕಾರಣ
Wednesday, April 16, 2025
ಲೋಕಬಂಧು ನ್ಯೂಸ್
ಉಡುಪಿ: ಕೇಂದ್ರ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದ್ದು ಪ್ರಜಾಪ್ರಭುತ್ವದ ಅಂಗಸಂಸ್ಥೆಗಳಾದ ಈ.ಡಿ, ಸಿ.ಬಿ.ಐ, ಐ.ಟಿಯನ್ನು ದುರುಪಯೋಗಪಡಿಸಿಕೊಂಡು ತನ್ನ ಕೈಗೊಂಬೆಗಳಂತೆ ಮಾಡಿ ವಿರೋಧ ಪಕ್ಷದ ನಾಯಕರ ಧ್ವನಿ ದಮನಗೊಳಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಆದಿವುಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ. ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು, ಕಾಂಗ್ರೆಸ್ ಪಕ್ಷ ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್, ಶುಭದ ರಾವ್, ಗೋಪಿನಾಥ್ ಭಟ್, ಅರವಿಂದ್ ಪೂಜಾರಿ, ಪ್ರದೀಪ್ ಶೆಟ್ಟಿ, ನವೀನ್ ಚಂದ್ರ ಸುವರ್ಣ, ರಾಘವೇಂದ್ರ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಪಕ್ಷದ ನಾಯಕರಾದ ರಾಜು ಪೂಜಾರಿ, ಮುರಳಿ ಶೆಟ್ಟಿ, ದಿನೇಶ್ ಪುತ್ರನ್, ಹರೀಶ್ ಕಿಣಿ, ಭುಜಂಗ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ಫಾl ವಿಲಿಯಮ್ ಮಾರ್ಟಿಸ್, ಸದಾಶಿವ ಕಟ್ಟೆಗುಡ್ಡೆ, ಮಹಾಬಲ ಕುಂದರ್, ಕೃಷ್ಣ ಶೆಟ್ಟಿ ಬಜಗೋಳಿ, ವಿಶ್ವಾಸ್ ಅಮೀನ್, ಹಬೀಬ್ ಆಲಿ, ವೆರೋನಿಕಾ ಕರ್ನೇಲಿಯೊ, ಡಾ. ಸುನಿತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಮೀನಾಕ್ಷಿ ಮಾಧವ ಬನ್ನಂಜೆ, ರೋಶಿ ಒಲಿವರ್, ಸತೀಶ್ ಕೊಡವೂರು, ಸಂಧ್ಯಾ ತಿಲಕ್ರಾಜ್, ಸುಕನ್ಯಾ ಪೂಜಾರಿ, ಗೀತಾ ವಾಗ್ಳೆ, ಸುರೇಶ್ ಶೆಟ್ಟಿ ಬನ್ನಂಜೆ, ಪ್ರಶಾಂತ್ ಜತ್ತನ್ನ, ಜಯಕುಮಾರ್, ಸಜ್ಜನ್ ಶೆಟ್ಟಿ ಮೊದಲಾವರಿದ್ದರು.