ಅಬ್ದುಲ್ ರಹಿಮಾನ್ ಕೊಲೆ: 15 ಮಂದಿಯ ವಿರುದ್ಧ ಕೇಸು
Wednesday, May 28, 2025
ಲೋಕಬಂಧು ನ್ಯೂಸ್, ಬಂಟ್ವಾಳ
ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆ ಯತ್ನ ಪ್ರಕರಣ ಸಂಬಂಧ ಸ್ಥಳೀಯರಿಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರು ಎನ್ನಲಾಗಿದೆ.