-->
ದ.ಕ. ಸಹಿತ 3 ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಅಸ್ತಿತ್ವಕ್ಕೆ

ದ.ಕ. ಸಹಿತ 3 ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಅಸ್ತಿತ್ವಕ್ಕೆ

ಲೋಕಬಂಧು ನ್ಯೂಸ್, ಬೆಂಗಳೂರು
ಅಬ್ದುಲ್ ರೆಹಮಾನ್ ಹತ್ಯೆ ಬೆನ್ನಲ್ಲೇ ರಾಜ್ಯ ಸರ್ಕಾರ ಕೋಮು ಸಂಘರ್ಷ ಮಟ್ಟಹಾಕಲು ಕೋಮು ನಿಗ್ರಹ ವಿಶೇಷ ಕಾರ್ಯಪಡೆ (ಸ್ಪೆಷಲ್‌ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್)  ರಚನೆ ಮಾಡಿ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಈ ಕೋಮು ನಿಗ್ರಹ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಆದೇಶ ಪ್ರಕಾರ ಒಟ್ಟು 248 ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನು ಈ ಕಾರ್ಯಪಡೆ ಒಳಗೊಂಡಿದ್ದು ಡಿಐಜಿಪಿ ಪೊಲೀಸ್ ಅಧಿಕಾರಿಗಳೂ ಇದ್ದಾರೆ.


ಈ ಹಿಂದಿನ ನಕ್ಸಲ್ ನಿಗ್ರಹ ಪಡೆಯಲ್ಲಿದ್ದ 656 ಸಿಬ್ಬಂದಿಗಳ ಪೈಕಿ 248 ಮಂದಿಯನ್ನು ಕೋಮು ನಿಗ್ರಹ ಪಡೆಗೆ ವರ್ಗಾಯಿಸಲಾಗಿದೆ.

Ads on article

Advertise in articles 1

advertising articles 2

Advertise under the article