-->
ಮೇ 30: ಜ್ಞಾನಸುಧಾ ಮಹಾಗಣಪತಿ ಕುಂಭಾಭಿಷೇಕ: 1.05 ಕೋ. ವಿದ್ಯಾರ್ಥಿ ವೇತನ ವಿತರಣೆ

ಮೇ 30: ಜ್ಞಾನಸುಧಾ ಮಹಾಗಣಪತಿ ಕುಂಭಾಭಿಷೇಕ: 1.05 ಕೋ. ವಿದ್ಯಾರ್ಥಿ ವೇತನ ವಿತರಣೆ

ಲೋಕಬಂಧು ನ್ಯೂಸ್, ಕಾರ್ಕಳ
ಇಲ್ಲಿನ ಗಣಿತ ನಗರದ ಜ್ಞಾನಸುಧಾ ಕಾರ್ಕಳ ಆವರಣದ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮೇ 3ರಂದು ನಡೆಯಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.
ಈ ಸಂದರ್ಭದಲ್ಲಿ ಸಂಸ್ಥೆಯ 2025ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ 64 ಲಕ್ಷ 22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ 18 ಲಕ್ಷ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆ 14 ಲಕ್ಷ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿ ಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿ ಹಾಗೂ ಅಧ್ಯಾಪಕರಿಗೆ ತಲಾ ಒಂದು ಸಾವಿರದಂತೆ 7 ಲಕ್ಷ 21 ಸಾವಿರ ಸೇರಿದಂತೆ ಒಟ್ಟು 1 ಕೋಟಿ 5 ಲಕ್ಷದ್ಟು ವಿದ್ಯಾರ್ಥಿ ವೇತನ ವಿತರಿಸಲಾಗುವುದು.


ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಆಗಮಿಸುವರು. ಇದೇ ಸಂದರ್ಭದಲ್ಲಿ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಹತ್ತರೊಳಗಿನ ರ್ಯಾಂಕ್ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು.


ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಡಿಸೆಂಬರ್ 22ರಂದು ನಡೆಯುವ ಎರಡನೇ ಹಂತದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.


ಕಳೆದ ವರ್ಷ ಸಂಸ್ಥೆಯಿಂದ ವಿದ್ಯಾರ್ಥಿ ವೇತನಕ್ಕಾಗಿ ಒಟ್ಟು 1 ಕೋಟಿ 79 ಲಕ್ಷ 54 ಸಾವಿರ ಹಾಗೂ ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ 51 ಲಕ್ಷ 64 ಸಾವಿರ ರೂ. ವಿನಿಯೋಗಿಸಿರುವುದನ್ನು ಸ್ಮರಿಸಬಹುದು ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article