
ಎಸ್ಎಸ್ಎಲ್.ಸಿ ಸಾಧನೆಗೆ ಶ್ಲಾಘನೆ
Friday, May 2, 2025
ಲೋಕಬಂಧು ನ್ಯೂಸ್
ಉಡುಪಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಉಡುಪಿ ಜಿಲ್ಲೆ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು, ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಮಂತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಶೇ. 89.96 ಫಲಿತಾಂಶ ಜಿಲ್ಲೆಗೆ ಲಭಿಸಿದ್ದು, ಈ ಸಾಧನೆಗೆ ಕಾರಣರಾದ ಜಿಲ್ಲಾಡಳಿತ, ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆ ಅಧಿಕಾರಿ ವರ್ಗದವರನ್ನು ಅಭಿನಂದಿಸುತ್ತೇನೆ.
ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಇದೀಗ ಎಸ್ಎಸ್ಎಲ್.ಸಿ ಫಲಿತಾಂಶದಲ್ಲೂ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.