
ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಅಶ್ರಫ್ ರಾಜೀನಾಮೆ
Wednesday, May 28, 2025
ಲೋಕಬಂಧು ನ್ಯೂಸ್, ಮಂಗಳೂರು
ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ತಡೆಯುವ ಜೊತೆಗೆ ದ್ವೇಷ ಭಾಷಣ ಮಾಡುವವರ ವಿರುದ್ಧ ಸರ್ಕಾರ ಕ್ರಮ ಜರುಗಿಸದಿರುವುದನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ರಾಜೀನಾಮೆ ಸಲ್ಲಿಸಿದ್ದಾರೆ.
ಈಮಧ್ಯೆ ದಕ್ಷಿಣ ಕನ್ನಡದಲ್ಲಿ ಮತೀಯ ಶಕ್ತಿಗಳನ್ನು ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದ.ಕ. ಜಿಲ್ಲಾ ಕಾಂಗ್ರೆಸ್ನ ಅಲ್ಪಸಂಖ್ಯಾತ ಘಟಕದ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಈ ಸಂಬಂಧ ಗುರುವಾರ ಮಂಗಳೂರಿನಲ್ಲಿ ಮುಖಂಡರು ಸಭೆಯೊಂದನ್ನು ಕರೆದಿದ್ದಾರೆ.