-->
ಬಿಜೆಪಿಯ ಅನುದಾನ ವಿವಾದಕ್ಕೆ ಸಿಎಂ ಸ್ಪಷ್ಟನೆ

ಬಿಜೆಪಿಯ ಅನುದಾನ ವಿವಾದಕ್ಕೆ ಸಿಎಂ ಸ್ಪಷ್ಟನೆ

ಲೋಕಬಂಧು ನ್ಯೂಸ್, ಬೆಂಗಳೂರು
ರಾಜ್ಯ ಸರ್ಕಾರ ಉರ್ದು ಭಾಷೆಗೆ 100 ಕೋಟಿ ರೂ. ಮತ್ತು ಕನ್ನಡ ಭಾಷೆಗೆ 32 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ ಎಂಬ ಪೋಸ್ಟರ್‌ ವೈರಲ್ ಆಗುತ್ತಿದೆ. ಬಿಜೆಪಿ ಕೂಡ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಟ್ವಿಟ್ ಮಾಡಿದ ಸಿಎಂ, ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲ‌ರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದು ವಾಗ್ದಾಳಿ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article