ಶಾಂತಿ ಕದಡಲು ಕಾಂಗ್ರೆಸ್ ಸರ್ಕಾರ ನೇರ ಕಾರಣ
Thursday, May 29, 2025
ಲೋಕಬಂಧು ನ್ಯೂಸ್, ಮಂಗಳೂರು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಪ್ರತೀ ಸಂದರ್ಭದಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುತ್ತದೆ. ಓಲೈಕೆ ರಾಜಕಾರಣ, ಪೊಲೀಸ್ ಇಲಾಖೆಯಲ್ಲಿ ಅತಿಯಾದ ಹಸ್ತಕ್ಷೇಪ, ಸಮಾಜಘಾತುಕ ಶಕ್ತಿಗಳ ಪೋಷಣೆಯಿಂದಾಗಿ ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ಕದಡಲು ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ನ ಮುಸ್ಲಿಂ ನಾಯಕರು ರಾಜೀನಾಮೆ ನೀಡುತ್ತಿರುವುದು ಒಂದು ಪ್ರಹಸನ ಎಂದವರು ಹೇಳಿದ್ದಾರೆ.