-->
ಗಾಂಧಿ ಆಸ್ಪತ್ರೆಯಿಂದ ಭಾರತೀಯ ಸೇನೆಗೆ ದೇಣಿಗೆ

ಗಾಂಧಿ ಆಸ್ಪತ್ರೆಯಿಂದ ಭಾರತೀಯ ಸೇನೆಗೆ ದೇಣಿಗೆ

ಲೋಕಬಂಧು ನ್ಯೂಸ್, ಉಡುಪಿ
ಆಪರೇಷನ್ ಸಿಂದೂರ ಮೂಲಕ ಉಗ್ರವಾದಿಗಳ ಮೂಲೋತ್ಪಾಟನೆಗೆ ಪಣತೊಟ್ಟು, ಕಾರ್ಯಾಚರಿಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ಮತ್ತು ಸ್ಥೈರ್ಯ ಮೂಡಿಸುವ ನಿಟ್ಟಿನಲ್ಲಿ ಇಲ್ಲಿನ ಗಾಂಧಿ ಆಸ್ಪತ್ರೆ ವತಿಯಿಂದ 55,555 ರೂ. ದೇಣಿಗೆ ನೀಡಲಾಯಿತು.
ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಮೂಲಕ ಜಿಲ್ಲಾಡಳಿತಕ್ಕೆ ಆಸ್ಪತ್ರೆ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಚೆಕ್ ಹಸ್ತಾಂತರಿಸಿದರು.


ಇದೇ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಉಡುಪಿ- ಕರಾವಳಿ ಅಧ್ಯಕ್ಷ ಡಾ.ಸುರೇಶ್ ಶೆಣೈ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯ ಇದ್ದರು.


ಪತ್ರಕರ್ತ ಜನಾರ್ದನ ಕೊಡವೂರು ಸ್ವಾಗತಿಸಿ, ನಿರೂಪಿಸಿದರು. 

Ads on article

Advertise in articles 1

advertising articles 2

Advertise under the article