-->
ಮಂಗಳೂರಿಗೆ ಹೋಗಿ ಬನ್ನಿ: ಬಿ.ಕೆ. ಹರಿಪ್ರಸಾದ್'ಗೆ ಸಿಎಂ ಸಲಹೆ

ಮಂಗಳೂರಿಗೆ ಹೋಗಿ ಬನ್ನಿ: ಬಿ.ಕೆ. ಹರಿಪ್ರಸಾದ್'ಗೆ ಸಿಎಂ ಸಲಹೆ

ಲೋಕಬಂಧು ನ್ಯೂಸ್, ಬೆಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯ ಅಧ್ಯಯನ ನಡೆಸಿ ಪರಸ್ಪರ ಹಿಂದೂ- ಮುಸ್ಲಿಮರಲ್ಲಿ ಸೌಹಾರ್ದತೆ ಮೂಡಿಸಲು ಮಂಗಳೂರಿಗೆ ತೆರಳುವಂತೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಆರೋಪಿಗಳು ಎಷ್ಟೇ ಪ್ರಭಾವಿಗಳಾದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ.


ಸೌಹಾರ್ದತೆ ಮೂಡಿಸಲು ಏನು ಬೇಕೋ ಅದನ್ನು ಮಾಡುತ್ತೇವೆ. ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ ಬಗ್ಗೆ ಚರ್ಚೆ ಮಾಡುತ್ತೇವೆ. ಕಾನೂನು ರೀತಿಯ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆ ಬೆಳಯಬೇಕು. ಹಿಂದೂ ಮುಸ್ಲಿಮರ ನಡುವೆ ದ್ವೇಷ ಬೆಳೆಯಬಾರದು ಎಂದರು.


ಈಮಧ್ಯೆ, ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

Ads on article

Advertise in articles 1

advertising articles 2

Advertise under the article