ಹಸಿವು ಮುಕ್ತ ದಿನ ಆಚರಣೆ
Wednesday, May 28, 2025
ಲೋಕಬಂಧು ನ್ಯೂಸ್, ಉಡುಪಿ
ಇಲ್ಲಿನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶಾಖೆಯಲ್ಲಿ ಬುಧವಾರ ಹಸಿವು ಮುಕ್ತ ದಿನ ಆಚರಿಸಲಾಗಿದ್ದು, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಮಂದಿ ಒಂದು ಹೊತ್ತಿನ ಊಟಕ್ಕಿಲ್ಲದವರೂ ನಮ್ಮ ದೇಶದಲ್ಲಿದ್ದಾರೆ. ಅಂಥವರ ಹಸಿವು ನೀಗಿಸುವುದು ಪುಣ್ಯದ ಕೆಲಸ ಎಂದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಸೋಪ್ ಮತ್ತು ಮಾರ್ಜಕ ಮಾಜಿ ಅಧ್ಯಕ್ಷೆ ವೆರೊನಿಕಾ ಕರ್ನೇಲಿಯೊ, ಉಡುಪಿ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ಒಳಕಾಡು, ಸಮಾಜ ಸೇವಕ ಝಹೀರ್ ಅಹ್ಮದ್ ಬೆಳಪು ಆಗಮಿಸಿದ್ದರು.
ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಲಬಾರ್ ಚಾರಿಟೇಬಲ್ ಟ್ರಸ್ಟ್ನ ಸಾಮಾಜಿಕ ಕಾರ್ಯ ವಿವರಿಸಿದರು.
ವಿದ್ಯಾ ಸರಸ್ವತಿ ಹಸಿವಿನ ಬಗ್ಗೆ ಮಾತನಾಡಿದರು. ಆಹಾರ ಪೊಟ್ಟಣಗಳನ್ನು ದಾನವಾಗಿ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು.
ಶಾಖಾ ವ್ಯವಸ್ಥಾಪಕ ಮುಸ್ತಫಾ, ಗುರುರಾಜ್, ಸಂದೀಪ್ ಸಫಲ್ಯ, ಮಾರುಕಟ್ಟೆ ವ್ಯವಸ್ಥಾಪಕ ತಂಝಿಮ್ ಶಿರ್ವ ಇದ್ದರು.
ವಿಘ್ನೇಶ್ ಸ್ವಾಗತಿಸಿ, ದಯಾನಂದ್ ವಂದಿಸಿದರು.