-->
ಪತ್ರಕರ್ತರ ಸಂಘ, ಐಎಂಎ ಮಾರ್ಗಸೂಚಿ ಫಲಕ ಅನಾವರಣ

ಪತ್ರಕರ್ತರ ಸಂಘ, ಐಎಂಎ ಮಾರ್ಗಸೂಚಿ ಫಲಕ ಅನಾವರಣ

ಲೋಕಬಂಧುನ್ಯೂಸ್, ಉಡುಪಿ
ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್ ಕೆರೆಯಲ್ಲಿ ಸ್ಥಾಪಿಸಲಾದ ಪತ್ರಕರ್ತರ ಸಂಘ ಹಾಗೂ ವೈದ್ಯಕೀಯ ಸಂಘದ ಮಾರ್ಗಸೂಚಿ ಫಲಕವನ್ನು ಗುರುವಾರ ಆಸ್ಪತ್ರೆ ಆಡಳಿತ ನಿರ್ದೇಶಕ ಎಂ. ಹರಿಶ್ಚಂದ್ರ ಅನಾವರಣಗೊಳಿಸಿದರು.
ಆರೋಗ್ಯ ತಪಾಸಣೆ ಅಗತ್ಯ
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯ ತಪಾಸಣೆ ಮಾಡುವುದು ಅತೀ ಅಗತ್ಯ. ಅದೇ ರೀತಿ ಪ್ರಥಮ ಚಿಕಿತ್ಸೆ ಬಗ್ಗೆಯೂ ಪತ್ರಕರ್ತರು ತರಬೇತಿ ಹೊಂದುವುದು ಮುಖ್ಯ. ತಮ್ಮ ಸಂಸ್ಥೆಯಿಂದ ಈ ಎರಡೂ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ, ಉಡುಪಿ ಕರಾವಳಿ ಐಎಂಎ ಅಧ್ಯಕ್ಷ ಡಾ.ಸುರೇಶ್ ಶೆಣೈ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಇದ್ದರು.
ಪತ್ರಕರ್ತ ಜನಾರ್ದನ ಕೊಡವೂರು ಸ್ವಾಗತಿಸಿ, ನಿರೂಪಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು.
ಮಾರ್ಗಸೂಚಿ ಫಲಕದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಕಚೇರಿ, ಉಡುಪಿ ಪತ್ರಿಕಾ ಭವನ (ಪ್ರೆಸ್ ಕ್ಲಬ್), ಐಎಂಎ ಭವನ ಮತ್ತು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಗೆ ಹೋಗುವ ಮಾರ್ಗ ಸೂಚಿಸಲಾಗಿದೆ.

Ads on article

Advertise in articles 1

advertising articles 2

Advertise under the article