-->
ಮೇ 30: 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತ

ಮೇ 30: 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತ

ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಶಾಲಾ ಪುನರಾರಂಭ ಮೇ 30ರಂದು ಪುಷ್ಪಾನಂದ ಫೌಂಡೇಶನ್ ವತಿಯಿಂದ ಸಿಹಿತಿಂಡಿ ನೀಡಿ ಸ್ವಾಗತಿಸುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕ ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ.ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 125 ಶಾಲೆಗಳ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಗುವುದು.


ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಣ ಪ್ರೇಮಿಗಳು ತಮ್ಮ ವ್ಯಾಪ್ತಿಯ ಶಾಲೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾಗುವಂತೆ ಶಾಸಕ ಯಶಪಾಲ್ ಮನವಿ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article