-->
ಆಧುನಿಕ ಭಾರತ ನಿರ್ಮಾಣಕ್ಕೆ ನೆಹರೂ ಅಡಿಪಾಯ

ಆಧುನಿಕ ಭಾರತ ನಿರ್ಮಾಣಕ್ಕೆ ನೆಹರೂ ಅಡಿಪಾಯ

ಲೋಕಬಂಧು ನ್ಯೂಸ್, ಬೆಂಗಳೂರು
ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರಲಾಲ್ ನೆಹರೂ ಆಧುನಿಕ ಭಾರತದ ನಿರ್ಮಾತೃ ಕೂಡಾ ಹೌದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮಂಗಳವಾರ ವಿಧಾನಸೌಧ ಆವರಣದಲ್ಲಿರುವ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.


ನೆಹರೂ ಪುಣ್ಯತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡಿದ್ದರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು.


ನೆಹರೂ ಪ್ರಧಾನಿಯಾಗಿದ್ದ 17 ವರ್ಷದ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಹಾಕಿದ ಅಡಿಪಾಯ ಕಾರಣ.


ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು. ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಹಾಕಿರದೇ ಹೋಗಿದ್ದರೆ ಇಂದಿನ ಭಾರತ ಇರುತ್ತಿರಲಿಲ್ಲ. ಆರ್ಥಿಕತೆಯಲ್ಲಿ ಜಗತ್ತಿನಲ್ಲಿ 4ನೇ ಸ್ಥಾನದಲ್ಲಿದ್ದರೆ ಅದಕ್ಕೆ ನೆಹರೂ  ಕಾರಣ ಎಂದರು.

Ads on article

Advertise in articles 1

advertising articles 2

Advertise under the article