ಪ್ರವಾಹ, ಅತಿವೃಷ್ಠಿ ಹಾನಿಗೆ ತ್ವರಿತವಾಗಿ ಸ್ಸಂದಿಸಿ
Thursday, May 29, 2025
ಲೋಕಬಂಧು ನ್ಯೂಸ್, ಬೆಂಗಳೂರು
ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಮಳೆಹಾನಿ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ನಡೆಸಿದರು.
ಈ ಬಾರಿ ಅವಧಿಗೂ ಮುನ್ನವೇ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ನಿರೀಕ್ಷೆಗಿಂತ ಹೆಚ್ಚಾಗಿ ಬಿದ್ದಿದೆ. ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.