
ಸಂಸ್ಕೃತ ವಿದ್ವಾಂಸ ಲಕ್ಷ್ಮೀನಾರಾಯಣ ಶರ್ಮ ನಿಧನ
Friday, May 30, 2025
ಲೋಕಬಂಧು ನ್ಯೂಸ್, ಪಡುಬಿದ್ರಿ
ಉಡುಪಿ ಶ್ರೀಮನ್ಮಧ್ವಸಿದ್ಧಾಂತಪ್ರಬೋಧಿನೀ ಸಂಸ್ಕೃತ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ವಿದ್ವಾನ್ ಪಡುಬಿದ್ರಿ ಲಕ್ಷ್ಮೀನಾರಾಯಣ ಶರ್ಮ ಶುಕ್ರವಾರ ನಿಧನರಾದರು.
ಅವರು ಬಿಎಸ್ಸಿಯಲ್ಲಿ ಆಗಿನ ಕಾಲದಲ್ಲಿ ಸ್ವರ್ಣ ಪದಕ ಗಳಿಸಿದ್ದರು.
ಅಲಂಕಾರ ಶಾಸ್ತ್ರ, ದ್ವೈತ ವೇದಾಂತ, ಧರ್ಮಶಾಸ್ತ್ರ, ವ್ಯಾಕರಣ ಶಾಸ್ತ್ರಗಳಲ್ಲಿ ವಿದ್ವತ್ಪದವಿ, ಸಂಸ್ಕೃತ ಎಂ.ಎ ಪದವಿ ಗಳಿಸಿದ ಅವರು, ಅಷ್ಟ ಮಠಗಳ ಹಲವಾರು ಯತಿಗಳಿಗೆ ಶಾಸ್ತ್ರಪಾಠ ಮಾಡಿದ್ದರು.
ಅವರ ಆತ್ಮಕ್ಕೆ ಸದ್ಗತಿ ದೊರಕಲೆಂದು ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥಿಸಿದ್ದಾರೆ.