-->
ಜೂ.28: ಸ್ವಾಮಿ ವೀರೇಶಾನಂದ ಸರಸ್ವತಿ 'ಮೌಲ್ಯಸುಧಾ' ಉಪನ್ಯಾಸ

ಜೂ.28: ಸ್ವಾಮಿ ವೀರೇಶಾನಂದ ಸರಸ್ವತಿ 'ಮೌಲ್ಯಸುಧಾ' ಉಪನ್ಯಾಸ

ಲೋಕಬಂಧು ನ್ಯೂಸ್, ಕಾರ್ಕಳ
ಇಲ್ಲಿನ ಗಣಿತನಗರದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್  ಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ನಡೆಯುತ್ತಿರುವ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಈ ತಿಂಗಳ 28ರಂದು ನಡೆಯಲಿದೆ.
ಅಂದು ಸಂಜೆ 6ರಿಂದ ನಡೆಯುವ ಮೌಲ್ಯಸುಧಾ ಮಾಲಿಕೆಯ 37ನೇ ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸ್ವಾಮೀಜಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ವ-ನಿಯಂತ್ರಣ:ಬಂಧನವೋ? ಸ್ವಾತಂತ್ರ್ಯವೋ? ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು.


ಆಸಕ್ತರಿಗೆ ಮುಕ್ತ ಪ್ರವೇಶವಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article