
ಜೂ.28: ಸ್ವಾಮಿ ವೀರೇಶಾನಂದ ಸರಸ್ವತಿ 'ಮೌಲ್ಯಸುಧಾ' ಉಪನ್ಯಾಸ
Wednesday, June 25, 2025
ಲೋಕಬಂಧು ನ್ಯೂಸ್, ಕಾರ್ಕಳ
ಇಲ್ಲಿನ ಗಣಿತನಗರದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ನಡೆಯುತ್ತಿರುವ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಈ ತಿಂಗಳ 28ರಂದು ನಡೆಯಲಿದೆ.
ಅಂದು ಸಂಜೆ 6ರಿಂದ ನಡೆಯುವ ಮೌಲ್ಯಸುಧಾ ಮಾಲಿಕೆಯ 37ನೇ ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸ್ವಾಮೀಜಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ವ-ನಿಯಂತ್ರಣ:ಬಂಧನವೋ? ಸ್ವಾತಂತ್ರ್ಯವೋ? ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು.
ಆಸಕ್ತರಿಗೆ ಮುಕ್ತ ಪ್ರವೇಶವಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.