-->
ಜೂ.29: ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣ ಮುಹೂರ್ತ

ಜೂ.29: ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣ ಮುಹೂರ್ತ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಸನ್ಯಾಸ ಸುವರ್ಣ ಮಹೋತ್ಸವ ಪ್ರಯುಕ್ತ ಶ್ರೀಕೃಷ್ಣನಿಗೆ ಸಮರ್ಪಿಸಲು ಸಂಕಲ್ಪಿಸಿರುವ ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಜೂನ್ 29ರಂದು ಚಾಲನೆ ನೀಡಲಾಗುವುದು.
ಅಂದು ಬೆಳಿಗ್ಗೆ 11 ಗಂಟೆಗೆ ಮಂತ್ರಾಲಯ ಶ್ರೀ ರಾಘವೇಂದ್ರ ಮಠಾಧೀಶ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಚಾಲನೆ ನೀಡುವರು. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದು, ವಿವಿಧ ಗಣ್ಯ ಮಹನೀಯರು ಉಪಸ್ಥಿತರಿರುವರು.
ಅಂದು ಬೆಳಿಗ್ಗೆ 8ರಿಂದ ಶ್ರೀಕೃಷ್ಣ ಸನ್ನಿಧಿಯ ಚಂದ್ರಶಾಲೆಯಲ್ಲಿ ಚತುರ್ಯುಗಮೂರ್ತಿ ಶ್ರೀಮನ್ಮೂಲರಾಮದೇವರ ಪೂಜೆ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ವಿದೇಶ ವ್ಯವಹಾರಗಳ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article