ಬಜ್ಪೆ ಎಸ್ಐ ರಶೀದ್ ಸಹಿತ 56 ಪೊಲೀಸರ ವರ್ಗ
Thursday, June 19, 2025
ಲೋಕಬಂಧು ನ್ಯೂಸ್, ಮಂಗಳೂರು
ಭರ್ಜರಿ ಸರ್ಜರಿಗೆ ಮುಂದಾಗಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದ್ದಾರೆ.ಜಿಲ್ಲೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಆಗಮನದ ವೇಳೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಿಬ್ಬಂದಿ ಬದಲಾವಣೆ ಬಗ್ಗೆಯೂ ಸಾರ್ವಜನಿಕವಾಗಿ ಬೇಡಿಕೆ ವ್ಯಕ್ತವಾಗಿತ್ತು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಬಿಜೆಪಿ ಟೀಕೆಗೆ ಗುರಿಯಾಗಿದ್ದ ಬಜ್ಪೆ ಠಾಣೆ ಎಸ್ಐ ರಶೀದ್ ಕೂಡಾ ವರ್ಗವಾಗಿದ್ದಾರೆ.
ಸಿಸಿಬಿ, ಸೆನ್ ಸೇರಿದಂತೆ ಕಮಿಷನರೇಟ್ ವ್ಯಾಪ್ತಿಗೆ ಒಳಪಡುವ ಠಾಣೆಗಳ ಹಲವು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.