-->
ಆ್ಯಂಬುಲೆನ್ಸ್ ಕೊಠಡಿ ಹಸ್ತಾಂತರ

ಆ್ಯಂಬುಲೆನ್ಸ್ ಕೊಠಡಿ ಹಸ್ತಾಂತರ

ಲೋಕಬಂಧು ನ್ಯೂಸ್, ಬ್ರಹ್ಮಾವರ
ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಆಶ್ರಯದಲ್ಲಿ ಜನೌಷಧಿ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿರುವ ಆ್ಯಂಬುಲೆನ್ಸ್‌ ಕೊಠಡಿ ಮತ್ತು 4 ಆಕ್ಸಿಜನ್ ಕಾನ್ಸೆಂಟ್ರೇಟರ್ ಹಸ್ತಾಂತರ ಸಮಾರಂಭ ಮೇ 31ರಂದು ಇಲ್ಲಿನ ಸಿಟಿ ಸೆಂಟರ್'ನಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ನಮ್ಮೊಳಗಿನ ನಮ್ಮತನ ಕಳೆದುಕೊಳ್ಳದೆ ಸದಾ ಕಾಲ ಜನೋಪಯೋಗಿಯಾಗಿ ಬದುಕು ಸಾಗಿಸಿದರೆ ನಮ್ಮ ಜೀವನ ಸಾರ್ಥಕವಾಗಲು ಸಾಧ್ಯ. ಶಾಲೆಯಲ್ಲಿ ಶಿಕ್ಷಣ ನೀಡಿದರೆ, ಮನೆಯಲ್ಲಿ ಸಂಸ್ಕಾರ ನೀಡುವ ಕಾರ್ಯ ನಡೆಯಬೇಕು. ನಮ್ಮ ವಾತಾವರಣ ತಿಳಿಮಾಡುವ ಕೆಲಸ ನಿತ್ಯ ನಿರಂತವಾಗಿರಬೇಕು ಎಂದರು.


ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ , ಜಯಂಟ್ಸ್ ಸಂಸ್ಥೆ ಪರಿಸರದ ಜನರಿಗೆ ಅನೇಕ ಜನೋಪಯೋಗಿ ಕಾರ್ಯಕ್ರಮ ನಡೆಸುತ್ತಿರುವುದು ಅಭಿನಂದನೀಯ ಎಂದರು.


ಜಯಂಟ್ಸ್ ಕೇಂದ್ರ ಸಮಿತಿ ಸದಸ್ಯ ದಿನಕರ ಅಮೀನ್, ಸ್ವಚ್ಛ ಭಾರತ ಮತ್ತು ವನಮಹೋತ್ಸವ ಕಾರ್ಯಕ್ರಮಗಳು ರಾಷ್ಟ್ರ ಮಟ್ಟದ ಕಾರ್ಯಕ್ರಮಗಳಾಗಿದ್ದು, ಅದನ್ನು ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದರು.


ಜಯಂಟ್ಸ್ ಫೆಡರೇಶನ್ ಅಧ್ಯಕ್ಷ ತೇಜೇಶ್ವರ್ ರಾವ್, ತಾ.ಪಂ. ಇಒ ಎಚ್.ವಿ ಇಬ್ರಾಹಿಂಪುರ ಶುಭ ಹಾರೈಸಿದರು.


ಈ ಸಂದಭ೯ದಲ್ಲಿ ಅಮೆರಿಕಾದ ಅನಿವಾಸಿ ಭಾರತೀಯ ಹಲವಾರು ಸಂಸ್ಥೆಗಳಿಗೆ ದಾನ ನೀಡಿದ ಡಾ.ಜೀವನ್ ಪ್ರಕಾಶಿನಿ ಮೂರ್ತಿ ಮತ್ತು ಎನ್.ಸಿ ಮೂರ್ತಿ ದಂಪತಿಯನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಅವರು  ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಅಧ್ಯಕ್ಷತೆ ವಹಿಸಿದ್ದ ಜಯಂಟ್ಸ್ ಗ್ರೂಪ್ ಅಧ್ಯಕ್ಷ ಅಣ್ಣಯ್ಯ ದಾಸ್ ಸ್ವಾಗತಿಸಿದರು.


ವಾರಂಬಳ್ಳಿ ಗ್ರಾ.ಪಂ. ಅಧ್ಯಕ್ಷ ನಿತ್ಯಾನಂದ ಬಿ.ಆರ್. ಅವರನ್ನು ಗೌರವಿಸಲಾಯಿತು.


ನಾಯ್ಕನಕಟ್ಟೆ ಶಾಲೆಗೆ ನೋಟ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.


ವೇದಿಕೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಮಹೇಶ್ ಐತಾಳ, ವಿವೇಕಾನಂದ ಕಾಮತ್, ನಿಕಟಪೂವ೯ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ಮುಂತಾದವರಿದ್ದರು.


ಕಾರ್ಯದರ್ಶಿ ಮಿಲ್ಟನ್ ಒಲಿವರ್ ವರದಿ ವಾಚಿಸಿದರು. ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಪ್ರಸ್ತಾವನೆಗೈದು, ಅತಿಥಿಗಳಿಗೆ ಸಿoದೂರ ವಿಶೇಷ ಗಿಡ ನೀಡಿ ಗೌರವಿಸಿದರು.


ದಿವ್ಯಪೂಜಾರಿ, ಶ್ರೀನಾಥ ಕೋಟ, ಪ್ರಸನ್ನ ಕಾರಂತ, ರೊನಾಲ್ಡ್ ಡಯಾಸ್ ಪರಿಚಯಿಸಿದರು. ರಾಘವೇಂದ್ರ ಪ್ರಭು 
ಕರ್ವಾಲು ನಿರೂಪಿಸಿ, ವಂದಿಸಿದರು.


ಈ ಸಂದರ್ಭದಲ್ಲಿ ಜನೌಷಧಿ ಸಿಬ್ಬಂದಿ ಮತ್ತು ಜಯಂಟ್ಸ್'ನ ಹಿರಿಯ ಸದಸ್ಯರನ್ನು ಗೌರವಿಸಲಾಯಿತು.


ಜಯಂಟ್ಸ್ ನಿರ್ದೇಶಕರಾದ ಪ್ರದೀಪ್ ಶೆಟ್ಟಿ ಮತ್ತು ಪ್ರತಿಮಾ ಡೋರಿಸ್ ಸಹಕರಿಸಿದರು.

Ads on article

Advertise in articles 1

advertising articles 2

Advertise under the article