-->
ಅಮ್ಮನ ನೆರವು ಟ್ರಸ್ಟ್ ವಿದ್ಯಾರ್ಥಿ ವೇತನ ವಿತರಣೆ

ಅಮ್ಮನ ನೆರವು ಟ್ರಸ್ಟ್ ವಿದ್ಯಾರ್ಥಿ ವೇತನ ವಿತರಣೆ

ಲೋಕಬಂಧು ನ್ಯೂಸ್, ಕಾರ್ಕಳ
ಇಲ್ಲಿಗೆ ಸಮೀಪದ ಬೈಲೂರು ಅಮ್ಮನ ನೆರವು ಟ್ರಸ್ಟ್ ವತಿಯಿಂದ ಬೈಲೂರು ಮತ್ತು ಸುತ್ತಮುತ್ತಲ ಶಾಲೆಗಳ ಪ್ರತಿಭಾವಂತ ಪಿಯುಸಿ ಮತ್ತು ಎಸ್ಎಸ್ಎಲ್.ಸಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಬೈಲೂರು ಜ್ಯೂನಿಯರ್ ಕಾಲೇಜು ಸಭಾಂಗಣದಲ್ಲಿ ಜೂನ್ 26ರಂದು ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ಅಕ್ಷರ ಕಾಂತಿಯಿಂದ ಸಮಗ್ರ ಸಮಾಜದ ಅಭಿವೃದ್ಧಿ ಸಾಧ್ಯ.


ಅಮ್ಮನ ನೆರವು ಟ್ರಸ್ಟ್ ಸರಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ದೊಡ್ಡ ಮೊತ್ತದ ವಿದ್ಯಾರ್ಥಿ ವೇತನ ನೀಡುವ ಮೂಲಕ ಮಾದರಿಯಾಗಿದೆ ಎಂದರು.


ಟ್ರಸ್ಟ್‌ ಅಧ್ಯಕ್ಷ ಅವಿನಾಶ್ ಜಿ. ಶೆಟ್ಟಿಯಂಥ ಯುವಕರು ಈ ಟ್ರಸ್ಟ್ ಸ್ಥಾಪನೆ ಮಾಡಿದ್ದು, ತಾಲೂಕಿನಾದ್ಯಂತ ನೂರಾರು ವಿದ್ಯಾರ್ಥಿಗಳಿಗೆ ಅಂದಾಜು 16 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡುತ್ತಿರುವುದು ಶ್ಲಾಘನೀಯ ಎಂದರು.


ತಾಲೂಕಿನ ಏಳು ಕೇಂದ್ರಗಳಲ್ಲಿ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಮೊದಲ ಹಂತದ ಕಾರ್ಯಕ್ರಮ ಬೈಲೂರು ಜ್ಯೂನಿಯರ್ ಕಾಲೇಜಿನಲ್ಲಿ ನಡೆದಿದೆ. ಈ ವರ್ಷ 16 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಅವಿನಾಶ್ ಜಿ. ಶೆಟ್ಟಿ ಹೇಳಿದರು.


ಬೈಲೂರಿನಲ್ಲಿ 13 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ, 32 ಮಂದಿ ಎಸ್ಎಸ್ಎಲ್.ಸಿ. ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ. ಮತ್ತು ಒಂದು ಶಾಲೆಗೆ 10 ಸಾವಿರ ರೂ. ನೆರವು ನೀಡಲಾಯಿತು.


ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಗಳ ಸ್ಥಾಪಕ ಡಾ. ಸುಧಾಕರ್ ಶೆಟ್ಟಿ ಅಮ್ಮನ ನೆರವು ಟ್ರಸ್ಟಿನ ಪಡೆದ ವಿದ್ಯಾರ್ಥಿ ವೇತನದ ಹಿಂದೆ ಉದಾತ್ತ ಆಶಯವಿದೆ. ಅದನ್ನು  ಸದುಪಯೋಗಪಡಿಸಿಕೊಳ್ಖುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ, ಶುಭ ಹಾರೈಸಿದರು.


ಉದ್ಯಮಿಗಳಾದ ಚಂದ್ರಶೇಖರ್ ಶೆಟ್ಟಿ (ದಾಮಣ್ಣ), ಬೈಲೂರು ಕೃಷ್ಣರಾಜ್ ಹೆಗ್ಡೆ ಮತ್ತು ಸುಮಿತ್ ಶೆಟ್ಟಿ ಬೈಲೂರು, ಲಯನ್ಸ್ ಅಧ್ಯಕ್ಷ ಗುತ್ತುಮನೆ ಪ್ರಶಾಂತ್ ಶೆಟ್ಟಿ, ಪ್ರಥಮ ದರ್ಜೆ ಗುತ್ತಿಗೆದಾರರಾದ ಪ್ರಸನ್ನ ಶೆಟ್ಟಿ ಬೈಲೂರು, ಉದ್ಯಮಿ ಜಯಪ್ರಕಾಶ್ ಶೆಟ್ಟಿ ಪುಣೆ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸ್ಟೀವನ್ ಡಿ'ಸೋಜ ಅಭ್ಯಾಗತರಾಗಿದ್ದರು.


ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸೀತಾರಾಮ್, ಪ್ರೌಢಶಾಲಾ ಮುಖ್ಯ ಶಿಕ್ಷಕ ನಾಗರಾಜ್ ಶುಭ ಹಾರೈಸಿದರು.


ಶಿಕ್ಷಕ ರಾಜೇಂದ್ರ ಭಟ್ ಕೆ. ಸ್ವಾಗತಿಸಿ, ನಿರೂಪಿಸಿದರು. ಮಾಡಿದರು. ನಿವೃತ್ತ ಶಿಕ್ಷಕ ವಸಂತ ಎಂ. ವಂದಿಸಿದರು.

Ads on article

Advertise in articles 1

advertising articles 2

Advertise under the article