ವಕ್ಫ್ ಕಾಯ್ದೆ ವಿರೋಧಿಸಿ ರಾಷ್ಟ್ರಪತಿಗೆ ಮನವಿ
Tuesday, June 17, 2025
ಲೋಕಬಂಧು ನ್ಯೂಸ್, ಉಡುಪಿ
ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ ಹೋರಾಟ ಸಮಿತಿ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ 2025ನ್ನು ವಿರೋಧಿಸಿ ಮಂಗಳವಾರ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.ವಕ್ಫ್ ತಿದ್ದುಪಡಿ ಕಾಯ್ದೆ 2025 ಅಸಾಂವಿಧಾನಿಕವಾಗಿದ್ದು, ಅದು ಮುಸ್ಲಿಮ್ ಸಮುದಾಯದ ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ. ಈ ತಿದ್ದುಪಡಿ ಕಾಯ್ದೆಯನ್ನು ವಾಪಾಸು ಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ ಹೋರಾಟ ಸಮಿತಿ ನಿಯೋಗದಲ್ಲಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಮುಹಮ್ಮದ್ ಮೌಲ, ಸಹಬಾಳ್ವೆ ಸಂಚಾಲಕ ಪ್ರೊ.ಕೆ.ಫಣಿರಾಜ್, ಸುಬಾನ್ ಹೊನ್ನಾಳ, ಇಸ್ಮಾಯಿಲ್ ಕಟಪಾಡಿ, ರಫೀಕ್ ಕುಂದಾಪುರ, ಮುಹಮ್ಮದ್ ಫೈಜ್, ಶಫಿ ಖಾಝಿ, ಜಿ.ಎಮ್. ಶರೀಫ್, ಅಝೀಜ್ ಉದ್ಯಾವರ, ಶೇಖ್ ಸಯ್ಯದ್ ಫರೀದ್, ಯಾಸೀನ್ ಕೋಡಿಬೆಂಗ್ರೆ ಮೊದಲಾದವರಿದ್ದರು.