-->
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ಲೋಕಬಂಧು ನ್ಯೂಸ್, ಬೆಂಗಳೂರು
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕಾ ಪ್ರವಾಸಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಕೇಂದ್ರದ ಕ್ರಮದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನಾನು ಕೂಡಾ ಈ ಹಿಂದೆ ಸಚಿವನಾಗಿದ್ದಾಗ ವಿದೇಶ ಭೇಟಿಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿರಲಿಲ್ಲ. ಬೆಂಗಳೂರಿನ ಅನೇಕ ರಾಜಕಾರಣಿಗಳಿಗೆ ಅನುವು ಮಾಡಿಕೊಟ್ಟಿದ್ದರು. ಆದರೆ, ನನಗೆ ಮಾಡಿಕೊಟ್ಟಿರಲಿಲ್ಲ.


ರಾಜಕೀಯ ತಾರತಮ್ಯವಾಗುತ್ತಿರುವುದು ಅದರಿಂದ ಸ್ಪಷ್ಟವಾಗಿದೆ. ಇಂಥ ವಿಚಾರದಲ್ಲೂ ರಾಜಕೀಯ ಮಾಡುವುದು ಒಳಿತಲ್ಲ ಎಂದರು.

Ads on article

Advertise in articles 1

advertising articles 2

Advertise under the article