-->
ರಸ್ತೆ ವಿಭಾಜಕಕ್ಕೆ ಕಾರು ಢಿಕ್ಕಿ: ಈರ್ವರ ದುರ್ಮರಣ

ರಸ್ತೆ ವಿಭಾಜಕಕ್ಕೆ ಕಾರು ಢಿಕ್ಕಿ: ಈರ್ವರ ದುರ್ಮರಣ

ಲೋಕಬಂಧು ನ್ಯೂಸ್, ಮಂಗಳೂರು
ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.ಮೃತರನ್ನು ಕೊಂಚಾಡಿಯ ಓಂಶ್ರೀ ಪೂಜಾರಿ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ.


ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.


ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು.


ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಟೆಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿವೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article