-->
ಕಡಲ ಕಿನಾರೆಯಲ್ಲಿ ತಾಮ್ರದ ಕಳಸ ಪತ್ತೆ

ಕಡಲ ಕಿನಾರೆಯಲ್ಲಿ ತಾಮ್ರದ ಕಳಸ ಪತ್ತೆ

ಲೋಕಬಂಧು ನ್ಯೂಸ್, ಕುಂದಾಪುರ
ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಸೋಮೇಶ್ವರ ಸಮುದ್ರ ತೀರದಲ್ಲಿ ದೇವಸ್ಥಾನದ ಗೋಪುರಕ್ಕೆ ಅಳವಡಿಸುವ ಸುಮಾರು 3 ಕೆ.ಜಿ ತೂಕದ ತಾಮ್ರದ ಕಳಸ ಪತ್ತೆಯಾಗಿದೆ.ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಸಂತರಾಮ ಆಚಾರ್, ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್., ಸಿಬ್ಬಂದಿಗಳಾದ ಯುವರಾಜ್ ಮತ್ತು ರಾಘವೇಂದ್ರ ದೇವಾಡಿಗ ಹಾಗೂ ಗೃಹರಕ್ಷಕ ದಳದ ನಾಗೇಂದ್ರ ಸ್ಥಳಕ್ಕೆ ಭೇಟಿ ನೀಡಿ ಸಮುದ್ರ ತೀರದಲ್ಲಿ ಪತ್ತೆಯಾದ ತಾಮ್ರದ ಕಳಸವನ್ನು ವಶಪಡಿಸಿಕೊಂಡಿದ್ದಾರೆ.


ಅದರ ವಾರಸುದಾರರು ಇದ್ದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯನ್ನು ಅಥವಾ ಮೊಬೈಲ್ ಸಂಖ್ಯೆ 9480800580ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Ads on article

Advertise in articles 1

advertising articles 2

Advertise under the article