-->
ದಿವ್ಯಾಂಗರಿಗೆ ಸವಲತ್ತು ವಿತರಣೆ

ದಿವ್ಯಾಂಗರಿಗೆ ಸವಲತ್ತು ವಿತರಣೆ

ಲೋಕಬಂಧು ನ್ಯೂಸ್, ಉಡುಪಿ
ಜಿಲ್ಲಾ ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳನ್ನು ಶಾಸಕ ಯಶಪಾಲ್ ಸುವರ್ಣ ಜೂ.25ರಂದು ಬುಧವಾರ ವಿತರಿಸಿದರು.
ಅರ್ಹ ಫಲಾನುಭವಿಗಳಿಗೆ ಕೃತಕ ಕಾಲು, ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್'ಟಾಪ್ ಹಾಗೂ ದಿವ್ಯಾಂಗ ವ್ಯಕ್ತಿಗಳ ವಿವಾಹ ಪ್ರೋತ್ಸಾಹ ಧನದ ಬಾಂಡ್'ಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶಪಾಲ್, ರಾಜ್ಯ ಹಾಗೂ ಕೇಂದ್ರ ಸರಕಾರಗಳು ದಿವ್ಯಾಂಗರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ರೂಪಿಸಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ದಿವ್ಯಾಂಗರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವಿಶೇಷ ಸಹಕಾರ ನೀಡಲು ಆದ್ಯತೆ ನೀಡುವುದಾಗಿ ತಿಳಿಸಿದರು.


ಉಡುಪಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ನಾಯ್ಕ್, ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ,  ಗ್ರಾಮ ಪಂಚಾಯತ್ ಸದಸ್ಯ ಆದರ್ಶ ಶೆಟ್ಟಿ ಕೆಂಜೂರು ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article