
ಶೈಕ್ಷಣಿಕ ನೆರವು ಹಸ್ತಾಂತರ
Tuesday, June 17, 2025
ಲೋಕಬಂಧು ನ್ಯೂಸ್, ಬ್ರಹ್ಮಾವರ
ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ಮೂಲಕ ಪಾರಂಪಳ್ಳಿ ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅನನ್ಯ ಭಟ್ ಅವರಿಗೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.
ಟ್ರಸ್ಟಿಗಳಾದ ಸದಾಶಿವ ಮಧ್ಯಸ್ಥ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಂ. ಶಿವರಾಮ ಉಡುಪ, ಉಪಾಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ, ಸುಬ್ರಾಯ ಉರಾಳ ಮುಂತಾದವರಿದ್ದರು.
ಸಭಾ ಕಾರ್ಯದರ್ಶಿ ಕೆ.ರಾಜಾರಾಮ ಐತಾಳ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.