-->
ಅಕ್ರಮ ಮರಳುಗಾರಿಕೆ: ಓರ್ವನ ಬಂಧನ

ಅಕ್ರಮ ಮರಳುಗಾರಿಕೆ: ಓರ್ವನ ಬಂಧನ

ಲೋಕಬಂಧು ನ್ಯೂಸ್, ಕುಂದಾಪುರ
ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ರಿಂಗ್ ರೋಡ್ ಸಮೀಪದ ಪಂಚಗಂಗಾವಳಿ ಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಸಂಬಂಧ ಓರ್ವನನ್ನು ಕುಂದಾಪುರ ಪೊಲೀಸರು ಜೂ.1ರಂದು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.ಹೊಳೆಯಲ್ಲಿ ಕೆಲವರು ಮರಳನ್ನು ತೆಗೆದು ದೋಣಿಯಲ್ಲಿ ತುಂಬಿಸುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ನಿರೀಕ್ಷಕ ನಂಜಾ ನಾಯ್ಕ್ ಸ್ಥಳಕ್ಕೆ ದಾಳಿ ನಡೆಸಿ, ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಆರೋಪಿ ಸುನಿಲ್ ಪರಾರಿಯಾಗಿದ್ದಾನೆ.ಆರೋಪಿಗಳು ಸಂಘಟಿತರಾಗಿ ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸಿರುವುದು ಕಂಡುಬಂದಿದ್ದು, ಸ್ಥಳದಲ್ಲಿದ್ದ ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ, ಮರಳು, ಟಿಪ್ಪರ್ ವಾಹನ ಸೇರಿದಂತೆ ಒಟ್ಟು 5.20 ಲಕ್ಷ ರೂ. ವೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article