-->
ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಲೋಕಬಂಧು ನ್ಯೂಸ್, ಬೆಳ್ತಂಗಡಿ
ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ  ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಹೇಳಿ ಹೆಗ್ಗಡೆ ಶುಭ ಹಾರೈಸಿದರು.ಯಂತ್ರಶ್ರೀ ಯೋಜನೆಯಡಿ ರಾಜ್ಯದ 96 ತಾಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ 1,00,245 ಎಕ್ರೆ ಕೃಷಿ ಭೂಮಿಯನ್ನು ಈಗಾಗಲೇ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿವಾಹಕ  ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article