-->
ದ.ಕ. ಪೊಲೀಸರ ವಿರುದ್ಧ ತನಿಖೆಗೆ ಎನ್ಎಚ್ಆರ್.ಸಿ ಆದೇಶ

ದ.ಕ. ಪೊಲೀಸರ ವಿರುದ್ಧ ತನಿಖೆಗೆ ಎನ್ಎಚ್ಆರ್.ಸಿ ಆದೇಶ

ಲೋಕಬಂಧು ನ್ಯೂಸ್, ಮಂಗಳೂರು
ಹಿಂದೂ ಕಾರ್ಯಕರ್ತರ ಮನೆಗೆ ನಿರಂತರ ಪೊಲೀಸರ ಭೇಟಿ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗ (ಎನ್ಎಚ್ಆರ್.ಸಿ) ಎಂಟ್ರಿ ಕೊಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ದ ತನಿಖೆಗೆ ಆದೇಶಿಸಿದೆ.ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ದೂರು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ತನಿಖಾ ವಿಭಾಗದ ಡಿಜಿಗೆ ತನಿಖೆ ನಡೆಸುವಂತೆ ಆದೇಶಿಸಿದೆ.


ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ಥಳ ಪರಿಶೀಲನೆ, ಪೊಲೀಸರ ದಾಖಲೆ ಪರಿಶೀಲನೆ ಮತ್ತು ಎಲ್ಲಾ ಸಂತ್ರಸ್ತರ ಹೇಳಿಕೆಗಳನ್ನು ಆಧರಿಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಎನ್‌ಎಚ್‌ಆರ್‌ಸಿ ಸೂಚಿಸಿದೆ.

Ads on article

Advertise in articles 1

advertising articles 2

Advertise under the article